Home ಪ್ರಮುಖ ಸುದ್ದಿ ನಟ ಪುನೀತ್ ರಾಜ್ ಕುಮಾರ್ ಜನ್ಮದಿನ ಆಚರಿಸಿದ ಅಭಿಮಾನಿಗಳು
ಪ್ರಮುಖ ಸುದ್ದಿ

ನಟ ಪುನೀತ್ ರಾಜ್ ಕುಮಾರ್ ಜನ್ಮದಿನ ಆಚರಿಸಿದ ಅಭಿಮಾನಿಗಳು

Share
Share

ಶಿಕಾರಿಪುರ ಲೈವ್:
ಪಟ್ಟಣದ ಖಾಸಗಿ‌ ಬಸ್ ನಿಲ್ದಾಣ ಸಮೀಪದ ನಟ ಪುನೀತ್ ರಾಜ್ ಕುಮಾರ್ ರಸ್ತೆಯಲ್ಲಿ ಪುನೀತ್ ಭಾವಚಿತ್ರದ ವಾಲ್ ಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಸೋಮವಾರ ಪುನೀತ್ ರಾಜ್ ಕುಮಾರ್ 50ನೇ ವರ್ಷದ ಜನ್ಮದಿನವನ್ನು ಅಭಿಮಾನಿಗಳು‌ ಆಚರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಾದ ರವೀಂದ್ರನಾಯ್ಕ ಹಾಗೂ ರೇವಣಸಿದ್ದಯ್ಯ ಹಿರೇಮಠ್ ಮಾತನಾಡಿ, ಅಪ್ಪುರವರ ಸಿನಿಮಾಗಳು ಯುವಕರಿಗೆ ಮಾದರಿಯಾಗಿವೆ. ಸಮಾಜಕ್ಕೆ ಸಂದೇಶ ನೀಡುವ ಚಿತ್ರಗಳಲ್ಲಿ ಪುನೀತ್ ರಾಜ್ ಕುಮಾರ್ ಅಭಿನಯಿಸಿದ್ದಾರೆ. ಪುನೀತ್ ನಮ್ಮ ಅರಣ್ಯ ಇಲಾಖೆಯ ರಾಯಭಾರಿಯಾಗಿದ್ದರು. ನಾವು ಬೇರೆ ದೇಶದ ಅರಣ್ಯಗಳ ಕುರಿತು ಮಾತನಾಡುತ್ತೇವೆ. ಆದರೆ ಗಂಧದಗುಡಿ ಸಿನಿಮಾ ಮೂಲಕ ಕಾಡು ಮತ್ತು ವನ್ಯ ಜೀವಿಗಳ ಉಳಿವಿನ ಕುರಿತು ಜಾಗೃತಿ ಮೂಡಿಸಿದರು. ಅಪ್ಪು ತತ್ವ ಆದರ್ಶಗಳನ್ನು ಯುವ ಜನತೆ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಶಾಲಾ ಮಕ್ಕಳಿಗೆ ಸಸಿ ವಿತರಿಸಲಾಯಿತು.

ಪುನೀತ್ ರಾಜ್ ಕುಮಾರ್ ಅಭಿಮಾನಿಗಳಾದ ವೈಭವ್ ಬಸವರಾಜ್, ಆರ್. ರಾಜಕುಮಾರ್, ಸುಬ್ರಮಣ್ಯ ರೇವಣಕರ್, ರವಿ, ಸಲೀಂ, ಮಧು, ಗಿಡ್ಡಪ್ಪ, ಕಾಳಿಂಗ ರಾವ್,ಮಂಜುನಾಥ್, ಯೋಗೇಶ್ ಮತ್ತಿತರರು ಉಪಸ್ಥಿತರಿದ್ದರು.

 

Share

Leave a comment

Leave a Reply

Your email address will not be published. Required fields are marked *

Related Articles
Homeಪ್ರಮುಖ ಸುದ್ದಿ

ಸಮಾಜಕ್ಕೆ ಭಾರವಾಗದಂತಹ ವ್ಯಕ್ತಿಗಳನ್ನು ನಿರ್ಮಾಣ ಮಾಡುವ ಜವಾಬ್ದಾರಿ ತಾಯಂದಿರ ಮೇಲಿದೆ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಸಮಾಜ ಹಾಗೂ ತಂದೆ ತಾಯಿಗೆ ಭಾರವಾಗದಂತಹ ವ್ಯಕ್ತಿಗಳನ್ನು ನಿರ್ಮಾಣ ಮಾಡುವ ಜವಾಬ್ದಾರಿ ತಾಯಂದಿರ...

ಪ್ರಮುಖ ಸುದ್ದಿ

ಸಂಭ್ರಮದಿಂದ ಹೋಳಿಹಬ್ಬ ಆಚರಿಸಿದ ಯುವ ಸಮೂಹ

ಶಿಕಾರಿಪುರ ಲೈವ್: ಪರಸ್ಪರ ಬಣ್ಣ ಹಚ್ಚುವ ಮೂಲಕ ಪಟ್ಟಣದ ಜನತೆ ಹೋಳಿ ಹಬ್ಬವನ್ನು ಶುಕ್ರವಾರ ಸಡಗರ...

Homeಪ್ರಮುಖ ಸುದ್ದಿ

ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮಾಳವಿಕಾ ಅವಿನಾಶ್ ಸಲಹೆ

ಶಿಕಾರಿಪುರ ಲೈವ್: ಮಹಿಳೆಯರು ಸಮಾಜ ಮುಖಿಯಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ...

ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ

ಶಿಕಾರಿಪುರ ಲೈವ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಪಟ್ಟ‌ಣದಲ್ಲಿ ಬಿಜೆಪಿ ಮುಖಂಡರು ಹಾಗೂ...