Home ಹಿರಿಯ ನಾಯಕರ ಹೋರಾಟ ನಮಗೆ ಪ್ರೇರಣೆಯಾಗಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
Home

ಹಿರಿಯ ನಾಯಕರ ಹೋರಾಟ ನಮಗೆ ಪ್ರೇರಣೆಯಾಗಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Share
Share

ಶಿಕಾರಿಪುರ ಲೈವ್:
ಭಾರತೀಯ ಜನಸಂಘ ಹಾಗೂ ಬಿಜೆಪಿ ಹಿರಿಯ ನಾಯಕರ ಹೋರಾಟ ನಮಗೆಲ್ಲ ಪ್ರೇರಣೆಯಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿಯವರ ಸ್ಮೃತಿ ದಿವಸ ಹಾಗೂ ಜನಸಂಘದ ಸ್ಥಾಪಕ ಸದಸ್ಯರಾದ ಜಗನ್ನಾಥರಾವ್ ಜೋಶಿ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1951 ರಲ್ಲಿ ಜನ ಸಂಘದ ಸ್ಥಾಪನೆಯಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಹಾಗೂ ಜಗನ್ನಾಥರಾವ್ ಜೋಶಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು ದೇಶಕ್ಕಾಗಿ ಹೋರಾಡಿದ ನಾಯಕರು. ಕರ್ನಾಟಕ ಕೇಸರಿ ಎಂದೆ ಪ್ರಸಿದ್ಧಿಯಾದ ಜೋಷಿಯವರು ಸಹ ದೇಶಕ್ಕಾಗಿ ಪ್ರಾಣವನ್ನೆ ತ್ಯಾಗ ಮಾಡಿದವರಾಗಿದ್ದಾರೆ. ಹಲವು ಹಿರಿಯ ನಾಯಕರ ಹೋರಾಟದಿಂದ ಬಿಜೆಪಿ ಪಕ್ಷ ಬೆಳೆದು ಅಧಿಕಾರ ಹಿಡಿದಿದೆ. ಹಿರಿಯ ನಾಯಕರನ್ನು ನಾವು ಸ್ಮರಣೆ ಮಾಡಿಕೊಳ್ಳಬೇಕು. ಪಕ್ಷ ಸಂಘಟಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ತಾಲೂಕು ಬಿಜೆಪಿ ಆಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ, ಮುಖಂಡರಾದ ಟಿ.ರಾಮನಾಯ್ಕ, ಕೆ.ಜಿ. ವಸಂತ ಗೌಡ್ರು, ಎಂ.ಬಿ. ಚನ್ನವೀರಪ್ಪ. ಶಿವಪ್ಪ, ಗೀರಿಶ್ ಧಾರವಾಡ. ಎ.ಬಿ. ಸುಧೀರ್. ವೀರನಗೌಡ, ಬೆಣ್ಣೆ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...