Home ಪ್ರಮುಖ ಸುದ್ದಿ ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ ಶಿವನ ಧ್ಯಾನಿಸುವ ಹಬ್ಬ: ಸಂಸದ ಬಿ.ವೈ. ರಾಘವೇಂದ್ರ
ಪ್ರಮುಖ ಸುದ್ದಿ

ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ ಶಿವನ ಧ್ಯಾನಿಸುವ ಹಬ್ಬ: ಸಂಸದ ಬಿ.ವೈ. ರಾಘವೇಂದ್ರ

Share
Share

ಶಿಕಾರಿಪುರ ಲೈವ್:
ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ,
ಶಿವನನ್ನು ಧ್ಯಾನ ಮಾಡುವ ಹಬ್ಬವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ನಡೆದ ಮಹಾಶಿವರಾತ್ರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತೀಯ ಸಂಸ್ಕೃತಿಯಲ್ಲಿ ಮಹಾಶಿವರಾತ್ರಿ ಮಹತ್ವದ ಹಬ್ಬವಾಗಿದೆ. ಶಿವರಾತ್ರಿ ಭಕ್ತಿಯ ರಾತ್ರಿಯಾಗಬೇಕು. ಶಿವನನ್ನು ಧ್ಯಾನ ಮಾಡುವುದೇ ಶಿವರಾತ್ರಿ ಹಬ್ಬದ ಮಹತ್ವವಾಗಿದೆ. ಶಿವನನ್ನು ಧ್ಯಾನಿಸುವ ಮೂಲಕ ಶಿವನ ಕೃಪೆಗೆ ಪಾತ್ರರಾಗಬೇಕು.
ಮಹಾಶಿವರಾತ್ರಿ ಹಬ್ಬವನ್ನು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದವರು ವಿಶ್ವದಾದ್ಯಂತ ವಿಶೇಷವಾಗಿ ಆಚರಿಸುತ್ತಾರೆ. ಜನರಲ್ಲಿ ಆತ್ಮ ಜಾಗೃತಿ, ಮೌಲ್ಯ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ
ಸಂಚಾಲಕರಾದ ಸ್ನೇಹಕ್ಕ, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕ ಅಧ್ಯಕ್ಷ ಎ.ಬಿ. ಸುಧೀರ್, ನಿವೃತ್ತ ಪಿಎಸ್ಐ ಕೋಮಲಾಚಾರ್, ವೀಣಾ,ಮಂಜುಳಾ, ಮಾಲಾ ಮತ್ತಿತರರು‌ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Homeಪ್ರಮುಖ ಸುದ್ದಿ

ಆರ್ ಸಿಬಿ(RCB) ಗೆಲುವು ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಶಿಕಾರಿಪುರ ಲೈವ್: ಐಪಿಎಲ್ ಪಂದ್ಯಾವಳಿಯಲ್ಲಿ “ಆರ್‌ಸಿಬಿ” ತಂಡ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ...

ಪ್ರಮುಖ ಸುದ್ದಿ

ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಮುಖಂಡರು ಟೀಕೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ: ಸಂಸದ ಬಿ.ವೈ.‌ರಾಘವೇಂದ್ರ

ಶಿಕಾರಿಪುರ ಲೈವ್ : ಆಪರೇಷನ್ ಸಿಂಧೂರದ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಅನಗತ್ಯವಾಗಿ ಟೀಕೆ ಮಾಡುತ್ತಿರುವುದು...

ಪ್ರಮುಖ ಸುದ್ದಿ

ಶಿಕಾರಿಪುರ: ಪುರಸಭೆ 39.17ಲಕ್ಷ ಉಳಿತಾಯ ಬಜೆಟ್‌ ಮಂಡನೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ 2025–26ನೇ ಸಾಲಿನ ಬಜೆಟ್‌ ಸಭೆಯಲ್ಲಿ 39.17ಲಕ್ಷ...

Homeಪ್ರಮುಖ ಸುದ್ದಿ

ಪುರಸಭೆ ಅಧ್ಯಕ್ಷರಾಗಿ ಬಿಜೆಪಿ ಸದಸ್ಯೆ ಸುನಂದಾ ಮಂಜುನಾಥ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಪಟ್ಟಣದ ಪುರಸಭೆ ನೂತನ ಅಧ್ಯಕ್ಷರಾಗಿ ಬಿಜೆಪಿ ಸುನಂದಾ ಮಂಜುನಾಥ್ ಬಾಳೆಕಾಯಿ ಅವರು ಶುಕ್ರವಾರ...