Home ಸಮಗ್ರ ತನಿಖೆ ನಡೆಸುವ ಮೂಲಕ ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಒದಗಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯ
Home

ಸಮಗ್ರ ತನಿಖೆ ನಡೆಸುವ ಮೂಲಕ ವಿನಯ್ ಸೋಮಯ್ಯ ಸಾವಿಗೆ ನ್ಯಾಯ ಒದಗಿಸಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯ

Share
Share

ಶಿಕಾರಿಪುರ ಲೈವ್:
ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಮಡಿಕೇರಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಪ್ರಕರಣದ ಬಗ್ಗೆ ಗೃಹಸಚಿವರು ಸಮಗ್ರ ತನಿಖೆ ನಡೆಸುವ ಮೂಲಕ ಅವರ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಒತ್ತಾಯಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಕಾಂಗ್ರೆಸ್ ಶಾಸಕ ಹಾಗೂ ಕಾರ್ಯಕರ್ತರ ಕಿರುಕುಳದಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ವಿನಯ್ ಸೋಮಯ್ಯ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವುದು ಅತ್ಯಂತ ನೋವಿನ ಸಂಗತಿ ಹಾಗೂ ದುರ್ದ್ಯೇವವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಕಾರ್ಯಕರ್ತರ ಮೇಲೆ ವಿನಾಃ ಕಾರಣ ಮೊಕದ್ದಮೆ ದಾಖಲಿಸುತ್ತಿರುವುದು ಕಿರುಕುಳ ನೀಡುತ್ತಿರುವುದು ಕಂಡು ಬರುತ್ತಿದೆ‌ ಎಂದು ಆರೋಪಿಸಿದರು.

ವಿನಯ್ ಸೋಮಯ್ಯ ಮೇಲೆ ಒತ್ತಡ ಕಿರುಕುಳ ಆಗಿರುವುದು ಡೆತ್ ನೋಟ್ ನಿಂದ ಕಂಡು ಬರುತ್ತಿದೆ. ರಾಜ್ಯ ಗೃಹ ಸಚಿವರು ಬಿಜೆಪಿ ಕಾರ್ಯಕರ್ತ ಎನ್ನುವುದಕ್ಕಿಂತ ಮಾನವೀಯತೆಯ ದೃಷ್ಠಿ ಮೇಲೆ ಈ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸಬೇಕು. ಆತ್ಮಹತ್ಯೆ ಹಿಂದೆ ಶಾಸಕರಿದ್ದರೂ ಅಥವಾ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್, ಬಿಜೆಪಿ ಅಧ್ಯಕ್ಷ ಸಂಕ್ಲಾಪುರ ಹನುಮಂತಪ್ಪ ಮತ್ತಿತರರು ಉಪಸ್ಥಿತರಿದ್ದರು‌.

Share

Leave a comment

Leave a Reply

Your email address will not be published. Required fields are marked *

Related Articles
Home

ಸಮಾನತೆಯಿಂದ ಬದುಕಲು ಅಗತ್ಯವಾದ ಸಂವಿಧಾನ ಅಂಬೇಡ್ಕರ್ ನೀಡಿದ್ದಾರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ

ಶಿಕಾರಿಪುರ ಲೈವ್: ದೇಶದಲ್ಲಿ ಎಲ್ಲಾ ಜಾತಿಯ ಜನರು ತಾರತಮ್ಯವಿಲ್ಲದೇ ಸಮಾನತೆಯಿಂದ ಜೀವನ ನಡೆಸಲು ಅಗತ್ಯವಾದ ಸಂವಿಧಾನವನ್ನು...

Home

ಬೈಕ್ ಕಳ್ಳತನ ಆರೋಪಿಗಳು ಹಾಗೂ 16 ಬೈಕ್ ವಶಕ್ಕೆ ಪಡೆದ ಪೊಲೀಸರು

ಶಿಕಾರಿಪುರ ಲೈವ್: ಶಿಕಾರಿಪುರ ಪಟ್ಟಣ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ನಡೆಸಿದ ಆರೋಪಿಗಳನ್ನು ಪಟ್ಟಣ...

Home

ಹಿರಿಯ ವಕೀಲರಾದ ಸದಾಶಿವರೆಡ್ಡಿ ಮೇಲೆ ನಡೆದ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ

ಶಿಕಾರಿಪುರ ಲೈವ್: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಸದಾಶಿವ...

Home

ಸಮಾನತೆಯಿಂದ ಬದುಕಲು ಅಂಬೇಡ್ಕರ್ ಸಂವಿಧಾನ ಸಹಕಾರಿ: ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್

ಶಿಕಾರಿಪುರ ಲೈವ್: ಮನುಷ್ಯ ಸಮಾನತೆಯಿಂದ ಬದುಕಲು ಅಂಬೇಡ್ಕರ್ ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಪುರಸಭೆ ಅಧ್ಯಕ್ಷೆ...