Home ತಾಳಗುಂದ ಸಮೀಪ ಕುಣಿಕೆಗೆ ಸಿಕ್ಕು ಚಿರತೆ ಸಾವು
Home

ತಾಳಗುಂದ ಸಮೀಪ ಕುಣಿಕೆಗೆ ಸಿಕ್ಕು ಚಿರತೆ ಸಾವು

Share
Share

ಶಿಕಾರಿಪುರ ಲೈವ್(ಶಿರಾಳಕೊಪ್ಪ) :
ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸಮೀಪದ ತಾಳಗುಂದ. ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಮೃತಪಟ್ಟಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಯಾವುದೋ ಕುಣಿಕೆಯು ಚಿರತೆಯ ಕೊರಳಿಗೆ ಸಿಕ್ಕಿಹಾಕಿಕೊಂಡಿದ್ದರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ಚಿರತೆ ಕುಣಿಕೆಗೆ ಬಿದ್ದು ಮೃತಪಟ್ಟಿದೆ.

ಕಳೆದ ಎರಡು ಮೂರು ದಿನಗಳ ಹಿಂದೆಯೇ ಚಿರತೆ ಸಾವನ್ನಪ್ಪಿರುವ ಸಾಧ್ಯತೆಯಿದ್ದು,ದೇಹದಿಂದ ದುರ್ವಾಸನೆ ತೀವ್ರವಾಗಿ ಹರಡಿದ ಹಿನ್ನೆಲೆಯಲ್ಲಿ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ಚಿರತೆ ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಗಂಡು ಚಿರತೆಯಾಗಿದ್ದು, ಪಶುವೈದ್ಯಾಧಿಕಾರಿಗಳಿಂದ ,ಮೃತ ಚಿರತೆಯ
ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಘಟನೆ ಸಂಬಂಧಿಸಿದಂತೆ ತನಿಖೆ ಮುಂದುವರೆಸಲಾಗುವುದು ಎಂದು ಶಿರಾಳಕೊಪ್ಪ ವಲಯ ಅರಣ್ಯಾಧಿಕಾರಿ ಜಾವೀದ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
Home

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ- ಉಪಾಧ್ಯಕ್ಷರಾಗಿ ನಿಂಬೆಗೊಂದಿ ಸುರೇಶ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ ಹುಲುಗಿನಕೊಪ್ಪ...

Home

ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ನಗರದ ಮಹಾದೇವಪ್ಪ ಅವರಿಗೆ ಆಭಿನಂದನಾ ಸಮಾರಂಭ

ಶಿಕಾರಿಪುರ ಲೈವ್: ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಕ್ಷೇತ್ರದಲ್ಲಿ ರೈತರು ಸಾಧನೆ ಮಾಡಬೇಕು ಎಂದು...

Home

ಶಿಕಾರಿಪುರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಶಿರಾಳಕೊಪ್ಪ...

Home

ಆರ್ ಎಸ್ ಎಸ್ ಗೃಹ ಸಂಪರ್ಕ ಅಭಿಯಾನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ- ಆರ್ ಎಸ್ ಎಸ್ ಚಿಂತನೆ ಮನೆ‌ ಮನೆಗೆ‌ ತಲುಪಿಸುವಂತೆ ಕರೆ

ಶಿಕಾರಿಪುರ ಲೈವ್: ಆರ್ ಎಸ್ ಎಸ್ ಚಿಂತನೆಗಳನ್ನು ಮನೆ‌ಮನೆಗೆ‌ ತಲುಪಿಸುವ ಜವಾಬ್ದಾರಿ ನಮ್ಮೇಲ್ಲರ ಮೇಲಿದೆ ಎಂದು...