Home ವ್ಯಾಲೆಂಟೈನ್ ಡೇ ಹೆಸರಲ್ಲಿ ನಡೆಯುವ ಅನಾಚಾರ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿ ಮನವಿ
Homeಪ್ರಮುಖ ಸುದ್ದಿ

ವ್ಯಾಲೆಂಟೈನ್ ಡೇ ಹೆಸರಲ್ಲಿ ನಡೆಯುವ ಅನಾಚಾರ ತಡೆಗಟ್ಟುವಂತೆ ಹಿಂದೂ ಜನಜಾಗೃತಿ ಸಮಿತಿ ಮನವಿ

Share
Share

ಶಿಕಾರಿಪುರ ಲೈವ್:
ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಶೀಲ್ದಾರ್ ರವಿಕುಮಾರ್ ಆವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು, ಕಳೆದ ಕೆಲವು ವರ್ಷಗಳಿಂದ ಫೆಬ್ರವರಿ 14ರಂದು ವ್ಯಾಲೆಂಟೈನ್ ಡೇ ಎಂದು ಆಚರಿಸುವ ಪಾಶ್ಚಾತ್ಯರ ದುಷ್ಟ ಪ್ರವೃತ್ತಿ ಭಾರತದಲ್ಲಿಯೂ ವ್ಯಾಪಕವಾಗಿ ಹರಡಿದೆ. ವ್ಯಾಪಾರ ಲಾಭಕ್ಕಾಗಿ ಪ್ರೇಮದ ಹೆಸರಿನಲ್ಲಿ ಈ ವಿಕೃತ ಕಲ್ಪನೆಯ ಪ್ರಚಾರದಿಂದ ಯುವ ಪೀಳಿಗೆ ಅನೈತಿಕತೆ ಚಟುವಟಿಕೆಯಲ್ಲಿ ಮುಳುಗುತ್ತಿದೆ. ಪಾರ್ಟಿಗಳಲ್ಲಿ ಯುವಕ,ಯುವತಿಯರು ಮದ್ಯಪಾನ,ಧೂಮಪಾನ, ಮಾದಕ ವಸ್ತುಗಳ ಸೇವನೆ ಮುಂತಾದ ಅನಾಚಾರಗಳಲ್ಲಿ ತೊಡಗಿರುವುದನ್ನು ಕಾಣಬಹುದಾಗಿದೆ ಎಂದು ಆರೋಪಿಸಿದ ಅವರು, ವ್ಯಾಲೆಂಟೈನ್ ಡೇ ಹೆಸರಿನಲ್ಲಿ ನಡೆಯುವ ಕಾನೂನು ಬಾಹಿರ ಕೃತ್ಯಗಳನ್ನು ತಡೆಯಲು ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳಾದ ಪರಶುರಾಮ, ಈರೇಶ್, ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ವಿ.ರಾಮಣ್ಣ ಹಿಂದೂ ಸಂಘಟನೆ ಮುಖಂಡರಾದ ಎಸ್.ವಿ.ಕೆ ಮೂರ್ತಿ, ರಘು, ಬೇಗೂರು ಮಂಜುನಾಥ್, ಮೋಹನ್, ಜಯ ಕರ್ನಾಟಕ ಸಂಘಟನೆ ಶಿವಯ್ಯ ಶಾಸ್ತ್ರಿ ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
ಪ್ರಮುಖ ಸುದ್ದಿ

ಸಂಭ್ರಮದಿಂದ ಹೋಳಿಹಬ್ಬ ಆಚರಿಸಿದ ಯುವ ಸಮೂಹ

ಶಿಕಾರಿಪುರ ಲೈವ್: ಪರಸ್ಪರ ಬಣ್ಣ ಹಚ್ಚುವ ಮೂಲಕ ಪಟ್ಟಣದ ಜನತೆ ಹೋಳಿ ಹಬ್ಬವನ್ನು ಶುಕ್ರವಾರ ಸಡಗರ...

Home

ಶಿಕಾರಿಪುರಕ್ಕೆ ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ ಅದ್ಧೂರಿ ಸ್ವಾಗತ

ಶಿಕಾರಿಪುರ ಲೈವ್: ಬಂಜಾರ ಸಮುದಾಯದ ಹಕ್ಕು ಪ್ರಗತಿ ಪರಿವರ್ತನೆಗಾಗಿ ಆಯೋಜಿಸಿರುವ ಗೋರ್ ಬಂಜಾರ ಜನಜಾಗೃತಿ ಸೇವಾ...

Homeಪ್ರಮುಖ ಸುದ್ದಿ

ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮಾಳವಿಕಾ ಅವಿನಾಶ್ ಸಲಹೆ

ಶಿಕಾರಿಪುರ ಲೈವ್: ಮಹಿಳೆಯರು ಸಮಾಜ ಮುಖಿಯಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ...

Home

ನಾಳೆ ಶಿಕಾರಿಪುರಕ್ಕೆ ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ

ಶಿಕಾರಿಪುರ ಲೈವ್: ಗೋರ್ ಬಂಜಾರ್ ಜನಜಾಗೃತಿ ರಥಯಾತ್ರೆ ಮಾರ್ಚ್ 8ರಂದು ಮಧ್ಯಾಹ್ನ12ಗಂಟೆಗೆ ಶಿಕಾರಿಪುರ ಪಟ್ಟಣಕ್ಕೆ ಆಗಮಿಸಲಿದ್ದು...