Home ನಿಂಬೆಗೊಂದಿ ಗ್ರಾಮ: ಕುಸ್ತಿ ಪಂದ್ಯಾವಳಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಚಾಲನೆ
Home

ನಿಂಬೆಗೊಂದಿ ಗ್ರಾಮ: ಕುಸ್ತಿ ಪಂದ್ಯಾವಳಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಚಾಲನೆ

Share
Share

ಶಿಕಾರಿಪುರ ಲೈವ್: ತಾಲ್ಲೂಕಿನ ನಿಂಬೆಗೊಂದಿ ಗ್ರಾಮದಲ್ಲಿ ಸೋಮವಾರ ಗುರು ಕೊಟ್ಟೂರೇಶ್ವರ ಸ್ವಾಮಿ ದೇವರ ರಥೋತ್ಸವ ಪ್ರಯುಕ್ತ ನಡೆದ ಕುಸ್ತಿ ಪಂದ್ಯಾವಳಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಗ್ರಾಮೀಣ ಕ್ರೀಡೆಯಾದ ಕುಸ್ತಿ ಕ್ರೀಡೆಯನ್ನು ಯುವಪೀಳಿಗೆ ಉಳಿಸಿ ಬೆಳೆಸಬೇಕು‌.ರಾಜ ಮಹಾರಾಜರ ಕಾಲದಿಂದ ಕುಸ್ತಿ ಕ್ರೀಡೆಗೆ ಪ್ರೋತ್ಸಾಹ ದೊರೆಯುತ್ತಿದೆ. ಗುರು ಕೊಟ್ಟೂರೇಶ್ವರ ಸ್ವಾಮಿ ದೇವರ ರಥೋತ್ಸವ ಪ್ರಯುಕ್ತ ಅದ್ದೂರಿಯಾಗಿ ಕುಸ್ತಿ ಪಂದ್ಯಾವಳಿ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ಕುಸ್ತಿ ಪಂದ್ಯಾವಳಿ ಆಗಮಿಸಿರುವ ಎಲ್ಲಾ ಪೈಲ್ವಾನರಿಗೆ ಸ್ವಾಗತ ಕೊರುತ್ತೇನೆ ಎಂದರು.

ಕುಸ್ತಿ ಪಂದ್ಯಾವಳಿ ಚಾಲನೆ ನೀಡುವ ಮುನ್ನ ಸಂಸದರಾದ ಬಿ.ವೈ. ರಾಘವೇಂದ್ರ ಗುರುಕೊಟ್ಟೂರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪೈಲ್ವಾನರು ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ತೋರಿದರು.

ಗುರುಕೊಟ್ಟೂರೇಶ್ವರ ದೇವಸ್ಥಾನ ಕಾರ್ಯಕಾರಿ ಸಮಿತಿ ಅಧ್ಯಕ್ಷ ನಾಗರಾಜಪ್ಪಗೌಡ್ರು, ಪದಾಧಿಕಾರಿಗಳು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...