Home ಮೊಳಕೆಯೊಡೆದ ಮೆಕ್ಕೆಜೋಳ ವೀಕ್ಷಿಸಿದ ಸಂಸದ ಬಿ.ವೈ. ರಾಘವೇಂದ್ರ
Home

ಮೊಳಕೆಯೊಡೆದ ಮೆಕ್ಕೆಜೋಳ ವೀಕ್ಷಿಸಿದ ಸಂಸದ ಬಿ.ವೈ. ರಾಘವೇಂದ್ರ

Share
Share

ಶಿಕಾರಿಪುರ ಲೈವ್:
ಶಿಕಾರಿಪುರ ಸಮೀಪದ ಸಾಲೂರು ರಸ್ತೆಯಲ್ಲಿ ಬಿಸಿಲಿನಲ್ಲಿ ಒಣಗಲು ಹಾಕಿದ ಮೆಕ್ಕೆಜೋಳ ಅಧಿಕ ಮಳೆ ಸುರಿದ ಪರಿಣಾಮ ಮೊಳಕೆಯೊಡೆದ ದೃಶ್ಯವನ್ನು ಸಂಸದ ಬಿ.ವೈ. ರಾಘವೇಂದ್ರ ಬುಧವಾರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಅಧಿಕ ಮಳೆಯಿಂದ ಜಿಲ್ಲೆಯಲ್ಲಿ ಮೆಕ್ಕೆಜೋಳ ಹಾಗೂ ಭತ್ತ ಬೆಳೆದ ರೈತರು ಸಂಕಷ್ಟ ಅನುಭವಿಸಿದ್ದಾರೆ. ಒಣಗಲು ಹಾಕಿದ ಲಕ್ಷಾಂತರ ರೂಪಾಯಿ‌ ಮೌಲ್ಯದ ಮೆಕ್ಕೆಜೋಳ ಮೊಳಕೆಯೊಡಿರುವುದರಿಂದ ಮಾರಾಟ ಮಾಡಲು ಬರುವುದಿಲ್ಲ. ಬೆಳೆ ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಬೇಕು. ಸರ್ಕಾರದ ಸಂವಹನ ನಡೆಸಿ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದು ರೈತರಿಗೆ ಭರವಸೆ ನೀಡಿದರು.

ಮುಖಂಡರಾದ ಕೆ.ಎಸ್. ಗುರುಮೂರ್ತಿ, ಎಂ.ಬಿ. ಚನ್ನವೀರಪ್ಪ, ಮಲ್ಲಿಕಾರ್ಜುನ ರೆಡ್ಡಿ, ಎ.ಬಿ. ಸುಧೀರ್, ಕೆ.ಜಿ. ಶಿವಪ್ಪಯ್ಯ, ಬೆಣ್ಣೆ ಪ್ರವೀಣ್, ಮಧು ಹೋತನಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಂವಿಧಾನ ಆಶಯಕ್ಕೆ ದಕ್ಕೆಯಾಗದಂತೆ ಜೀವನ ನಡೆಸಿ: ತಹಶೀಲ್ದಾರ್ ಮಲ್ಲೇಶ್ .ಬಿ. ಪೂಜಾರ್ ಸಲಹೆ

ಶಿಕಾರಿಪುರ ಲೈವ್: ಸಂವಿಧಾನದ ಆಶಯಕ್ಕೆ ದಕ್ಕೆಯಾಗದಂತೆ ನಾವು ಜೀವನ ನಡೆಸಬೇಕು ಎಂದು ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್...

Home

ರೈತರ ಸಂಕಷ್ಟಕೆ ಅಧಿಕಾರಿಗಳು ಸ್ಪಂದಿಸಬೇಕು: ಶಾಸಕ ಬಿ.ವೈ. ವಿಜಯೇಂದ್ರ ಸೂಚನೆ

ಶಿಕಾರಿಪುರ ಲೈವ್: ರೈತರ ಕಷ್ಟಕ್ಕೆ ಅಧಿಕಾರಿಗಳು ಸ್ಪಂದಿಸಬೇಕು ಎಂದು ಶಾಸಕ‌ ಬಿ.ವೈ. ವಿಜಯೇಂದ್ರ ಸೂಚಿಸಿದರು. ಪಟ್ಟಣದ...

Home

ನಿರಂತರ ಮಳೆ ನಾಳೆ(ಶನಿವಾರ) ಶಿಕಾರಿಪುರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಿನಾಂಕ 26/7/2025(ಶನಿವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...

Home

ನಿರಂತರ ಮಳೆ ಶಿಕಾರಿಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಶಿಕಾರಿಪುರ ಲೈವ್: ತಾಲೂಕಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಂದು ದಿನಾಂಕ 25/7/2025(ಶುಕ್ರವಾರ) ಶಿಕಾರಿಪುರ ತಾಲ್ಲೂಕಿನ ಎಲ್ಲಾ...