Home ಮೈಲಾರಲಿಂಗೇಶ್ವರ ದೇವರ ಧಾರ್ಮಿಕ ಕಾರ್ಯಕ್ರಮ ಗಟ್ ಪರವು
Homeಪ್ರಮುಖ ಸುದ್ದಿ

ಮೈಲಾರಲಿಂಗೇಶ್ವರ ದೇವರ ಧಾರ್ಮಿಕ ಕಾರ್ಯಕ್ರಮ ಗಟ್ ಪರವು

Share
Share

ಶಿಕಾರಿಪುರ ಲೈವ್:
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಮೈಲಾರಲಿಂಗೇಶ್ವರ ದೇವರ ಕಾರ್ಣಿಕೋತ್ಸವ ಪ್ರಯುಕ್ತ ಮೈಲಾರಲಿಂಗೇಶ್ವರ ದೇವರ ಭಕ್ತರು ಹಾಗೂ ಗೊರವಯ್ಯನವರು ಸಂಪ್ರದಾಯದಂತೆ ಪಟ್ಟಣದ ಮಾಸೂರು ರಸ್ತೆಯಲ್ಲಿರುವ ಶಿಭಾರ ಕಟ್ಟೆಯಲ್ಲಿ ಬುಧವಾರ ಧಾರ್ಮಿಕ ಕಾರ್ಯಕ್ರಮ ಗಟ್‌ಪರವು ನಡೆಸಿದರು.

ಸಂಜೆ ಗೊರವಯ್ಯನವರು ಹಾಗೂ ದೇವರು ಹೊತ್ತ ಮಹಿಳೆಯರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆದವು. ಮಹಿಳೆಯರು ಮಕ್ಕಳು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಶಿಭಾರಕಟ್ಟೆ ಬಳಿ ಜಮಾಯಿಸಿ, ತಮ್ಮ ಮನೆಯಿಂದ ತಯಾರಿಸಿಕೊಂಡು ಬಂದಿದ್ದ ತಿನಿಸುಗಳಿಂದ ನೈವೆದ್ಯ ತಯಾರಿಸಿ ಮೈಲಾರಲಿಂಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅರ್ಪಿಸಿದರು. ವಿಶೇಷ ಪೂಜೆ ಹಿನ್ನೆಲೆ ಶಿಭಾರಕಟ್ಟೆಯನ್ನು ವಿವಿಧ ಪುಷ್ಪಗಳಿಂದ ಸಿಂಗರಿಸಲಾಗಿತ್ತು.

ಗೊರವಯ್ಯನವರು ಬಾಳೆಹಣ್ಣು ಸಕ್ಕರೆ ತುಪ್ಪ ಹಾಲು ಬೆರೆಸಿ,ಹಣ್ಣು ತುಪ್ಪದ ನೈವೆದ್ಯ ಮಾಡಿ ಭಕ್ತರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಭಕ್ತರು ಮೈಲಾರಲಿಂಗೇಶ್ವರ ದೇವರಿಗೆ ಏಳುಕೋಟಿ ಏಳುಕೋಟಿ–ಚಾಂಗ್‌ ಬಲೋ ಎಂದು ಭಕ್ತಿಯಿಂದ ಜಯಘೋಷವನ್ನು ಹಾಕುತ್ತಿದ್ದರು. ಶಿಭಾರದಲ್ಲಿ ಧಾರ್ಮಿಕ ಕಾರ್ಯ ಗಟ್ ಪರವು ಮುಗಿದ ನಂತರ ಶಿಬಾರಕಟ್ಟೆಯಿಂದ ಗಿಡ್ಡಯ್ಯ ದೇವಸ್ಥಾನದವರೆಗೂ ಮೆರವಣಿಗೆ ಹೊರಟ ಗೊರವಯ್ಯನವರು,ಈ ಸಂದರ್ಭದಲ್ಲಿ ಭಕ್ತರು ತಮ್ಮ ಮನೆ ಮುಂದೆ ನೀಡುವ ಬಾಳೆಹಣ್ಣು ಸಕ್ಕರೆ ತುಪ್ಪ ಹಾಲು ತೆಗೆದುಕೊಂಡು ಹಣ್ಣು ತುಪ್ಪದ ನೈವೆದ್ಯ ಮಾಡಿ ಭಕ್ತರಿಗೆ ವಿತರಿಸಿದರು. ನಂತರ ಗಿಡ್ಡೆಶ್ವರ ದೇವಸ್ಥಾನದಲ್ಲಿ ಗೊರವಯ್ಯನವರು ವಿಶೇಷ ಪೂಜೆ ಸಲ್ಲಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles
Home

ಸಮಾನತೆಯಿಂದ ಬದುಕಲು ಅಗತ್ಯವಾದ ಸಂವಿಧಾನ ಅಂಬೇಡ್ಕರ್ ನೀಡಿದ್ದಾರೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ

ಶಿಕಾರಿಪುರ ಲೈವ್: ದೇಶದಲ್ಲಿ ಎಲ್ಲಾ ಜಾತಿಯ ಜನರು ತಾರತಮ್ಯವಿಲ್ಲದೇ ಸಮಾನತೆಯಿಂದ ಜೀವನ ನಡೆಸಲು ಅಗತ್ಯವಾದ ಸಂವಿಧಾನವನ್ನು...

Home

ಬೈಕ್ ಕಳ್ಳತನ ಆರೋಪಿಗಳು ಹಾಗೂ 16 ಬೈಕ್ ವಶಕ್ಕೆ ಪಡೆದ ಪೊಲೀಸರು

ಶಿಕಾರಿಪುರ ಲೈವ್: ಶಿಕಾರಿಪುರ ಪಟ್ಟಣ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ನಡೆಸಿದ ಆರೋಪಿಗಳನ್ನು ಪಟ್ಟಣ...

Home

ಹಿರಿಯ ವಕೀಲರಾದ ಸದಾಶಿವರೆಡ್ಡಿ ಮೇಲೆ ನಡೆದ ಹಲ್ಲೆ ಖಂಡಿಸಿ ವಕೀಲರ ಪ್ರತಿಭಟನೆ

ಶಿಕಾರಿಪುರ ಲೈವ್: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಸದಾಶಿವ...

Home

ಸಮಾನತೆಯಿಂದ ಬದುಕಲು ಅಂಬೇಡ್ಕರ್ ಸಂವಿಧಾನ ಸಹಕಾರಿ: ಪುರಸಭೆ ಅಧ್ಯಕ್ಷೆ ಸುನಂದಾ ಮಂಜುನಾಥ್

ಶಿಕಾರಿಪುರ ಲೈವ್: ಮನುಷ್ಯ ಸಮಾನತೆಯಿಂದ ಬದುಕಲು ಅಂಬೇಡ್ಕರ್ ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಪುರಸಭೆ ಅಧ್ಯಕ್ಷೆ...