Home ಶಿಕಾರಿಪುರ: ಏಪ್ರಿಲ್.12ಕ್ಕೆ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ
Homeನಮ್ಮೂರ ವಿಶೇಷ

ಶಿಕಾರಿಪುರ: ಏಪ್ರಿಲ್.12ಕ್ಕೆ ಹುಚ್ಚರಾಯಸ್ವಾಮಿ ದೇವರ ಬ್ರಹ್ಮ ರಥೋತ್ಸವ

Share
Share

ಶಿಕಾರಿಪುರ ಲೈವ್:
ಐತಿಹಾಸಿಕ ಹಿನ್ನೆಲೆ ಹೊಂದಿರುವ ಪಟ್ಟಣದ ಹುಚ್ಚರಾಯಸ್ವಾಮಿ(ಆಂಜನೇಯ) ದೇವಸ್ಥಾನದ ಬ್ರಹ್ಮ ರಥೋತ್ಸವ(ಜಾತ್ರಾ ಮಹೋತ್ಸವ) ಕಾರ್ಯಕ್ರಮ ಏ.12ರಂದು(ಶನಿವಾರ) ನಡೆಯಲಿದೆ.

 

ಹುಚ್ಚರಾಯಸ್ವಾಮಿ ದೇವರ ಬ್ರಹ್ಮರಥೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಜಾತ್ರಾ ಮಹೋತ್ಸವ ಪ್ರಯುಕ್ತ ಏ.7ರಂದು(ಸೋಮವಾರ) ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಕಂಕಣಧಾರಣೆ ಕಾರ್ಯಕ್ರಮ ನಡೆಯಿತು.

ಕಂಕಣಧಾರಣೆ ಕಾರ್ಯಕ್ರಮದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಪಾಲ್ಗೊಂಡಿದ್ದರು‌. ಏ.10ರಂದು ಚಕ್ರ ರಥೋತ್ಸವ ಹಾಗೂ ಏ.11ರಂದು ಪುಷ್ಪ ರಥೋತ್ಸವ ನಡೆಯಲಿದೆ. ಏ.12ರಂದು(ಶನಿವಾರ) ಬೆಳಿಗ್ಗೆ 8.20ರಿಂದ8.30ರವರೆಗಿನ ವೃಷಭ ಲಗ್ನದ ಶುಭ ಸಂದರ್ಭದಲ್ಲಿ ಹುಚ್ಚರಾಯಸ್ವಾಮಿ ದೇವಸ್ಥಾನ ಅವರಣದಿಂದ ಬ್ರಹ್ಮ ರಥೋತ್ಸವಕ್ಕೆ ಚಾಲನೆ ದೊರೆಯಲಿದೆ. ಬ್ರಹ್ಮರಥೋತ್ಸವ ಪ್ರಯುಕ್ತ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಏ.13ರಂದು ಸಂಜೆ ಹುಚ್ಚರಾಯ ಸ್ವಾಮಿ ಕೆರೆಯಲ್ಲಿ ಸಿಡಿ ಮದ್ದುಗಳೊಂದಿಗೆ ಹುಚ್ಚರಾಯಸ್ವಾಮಿ ದೇವರ ತೆಪ್ಪೋತ್ಸವ ಕಾರ್ಯಕ್ರಮ ಜರುಗಲಿದೆ.

Share

Leave a comment

Leave a Reply

Your email address will not be published. Required fields are marked *

Related Articles
Home

ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ- ಉಪಾಧ್ಯಕ್ಷರಾಗಿ ನಿಂಬೆಗೊಂದಿ ಸುರೇಶ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ತಾಲೂಕು ವ್ಯವಸಾಯೋತ್ಪನ್ನಗಳ ಮಾರಾಟ ಸಹಕಾರ ಸಂಘದ(ಟಿಎಪಿಸಿಎಂಎಸ್) ನೂತನ ಅಧ್ಯಕ್ಷರಾಗಿ ಸುನೀತಾ ಯೋಗೇಶಪ್ಪ ಹುಲುಗಿನಕೊಪ್ಪ...

Home

ರಾಜ್ಯ ಕೃಷಿಕ ಸಮಾಜದ ಅಧ್ಯಕ್ಷರಾಗಿ ಆಯ್ಕೆಯಾದ ನಗರದ ಮಹಾದೇವಪ್ಪ ಅವರಿಗೆ ಆಭಿನಂದನಾ ಸಮಾರಂಭ

ಶಿಕಾರಿಪುರ ಲೈವ್: ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಕ್ಷೇತ್ರದಲ್ಲಿ ರೈತರು ಸಾಧನೆ ಮಾಡಬೇಕು ಎಂದು...

Home

ಶಿಕಾರಿಪುರ: ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಮಠದ್ ಅವಿರೋಧ ಆಯ್ಕೆ

ಶಿಕಾರಿಪುರ ಲೈವ್: ಶಿಕಾರಿಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಎಂ. ನವೀನ್ ಕುಮಾರ್ ಶಿರಾಳಕೊಪ್ಪ...

Home

ತಾಳಗುಂದ ಸಮೀಪ ಕುಣಿಕೆಗೆ ಸಿಕ್ಕು ಚಿರತೆ ಸಾವು

ಶಿಕಾರಿಪುರ ಲೈವ್(ಶಿರಾಳಕೊಪ್ಪ) : ತಾಲೂಕಿನ ಶಿರಾಳಕೊಪ್ಪ ಪಟ್ಟಣದ ಸಮೀಪದ ತಾಳಗುಂದ. ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಹಿಂಭಾಗದಲ್ಲಿ...