Home ಪ್ರಮುಖ ಸುದ್ದಿ ಅಂಬ್ಲಿಗೊಳ್ಳ ಜಲಾಶಯ ಹಿನ್ನೀರಿನಲ್ಲಿ ಹುಲಿ ಮೃತ ದೇಹ ಪತ್ತೆ
ಪ್ರಮುಖ ಸುದ್ದಿ

ಅಂಬ್ಲಿಗೊಳ್ಳ ಜಲಾಶಯ ಹಿನ್ನೀರಿನಲ್ಲಿ ಹುಲಿ ಮೃತ ದೇಹ ಪತ್ತೆ

Share
Share

  ಶಿಕಾರಿಪುರ ಲೈವ್:

ಶಿಕಾರಿಪುರ ಹಾಗೂ ಸಾಗರ ತಾಲ್ಲೂಕಿನ‌ ಗಡಿಭಾಗದಲ್ಲಿರುವ ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತ ದೇಹ ಸೋಮವಾರ ಸಂಜೆ ಪತ್ತೆಯಾಗಿದೆ.

ಫೆ.17ರಂದು ಸೋಮವಾರ ಸಂಜೆ 7ಘಂಟೆಗೆ ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಮೃತ ದೇಹ ತೇಲುತ್ತಿರುವುದು ಕಂಡು ಬಂದಿದ್ದು,ಹುಲಿಯ ಮೃತ ದೇಹವನ್ನು ನೀರಿನಿಂದ ಹೊರತೆಗೆದು ನೋಡಲಾಗಿದ್ದು ಅಂದಾಜು 8ರಿಂದ 10ವರ್ಷ ವಯಸ್ಸಿನ ಗಂಡು ಹುಲಿಯಾಗಿರುವುದು ಕಂಡು ಬಂದಿದೆ.

ಹುಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಕದ್ದಮೆ ದಾಖಲಿಸಿ,ಘನ ನ್ಯಾಯಲಯದ ಅನುಮತಿ ಪಡೆದು ಫೆ.18ರಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳು, ಗೌತಮಪುರ ಗ್ರಾಮ ಪಂಚಾಯಿತಿ ಸದಸ್ಯರು, ಶಿಕಾರಿಪುರ ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ,ಅಂಬ್ಲಿಗೊಳ ವಲಯ ಅರಣ್ಯಾಧಿಕಾರಿ ಉಪಸ್ಥಿತಿಯಲ್ಲಿ ಪಶು ವೈಧ್ಯಾಧಿಕಾರಿಗಳು, ಹುಲಿ ಮತ್ತು ಸಿಂಹಧಾಮ ತಾವರೆಕೊಪ್ಪ, ಇವರಿಂದ ಮರಣೋತ್ತರ ಪರೀಕ್ಷೆ ನಡೆಸಿ, ಸದರಿ ಗಂಡು ಹುಲಿಯ ಸಾವಿನ ಕಾರಣ ತಿಳಿಯಲು ಹೆಚ್ಚಿನ ಪರೀಕ್ಷೆಗಾಗಿ ಅಗತ್ಯ ಸತ್ತ ಹುಲಿಯ ದೇಹದ ಭಾಗಗಳ ಮಾದರಿ/ಅಂಗಾಂಶಗಳನ್ನು ಸಂಗ್ರಹಿಸಿ, ನ್ಯಾಯಲಯದ ಅನುಮತಿಯಂತೆ ಸದರಿ ಮೃತ ದೇಹವನ್ನು ನಿಯಮನುಸಾರ ದಹಿಸಲಾಯಿತು ಎಂದು ಸಾಗರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ.ಮೋಹನ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles
ಪ್ರಮುಖ ಸುದ್ದಿ

ಸಂಭ್ರಮದಿಂದ ಹೋಳಿಹಬ್ಬ ಆಚರಿಸಿದ ಯುವ ಸಮೂಹ

ಶಿಕಾರಿಪುರ ಲೈವ್: ಪರಸ್ಪರ ಬಣ್ಣ ಹಚ್ಚುವ ಮೂಲಕ ಪಟ್ಟಣದ ಜನತೆ ಹೋಳಿ ಹಬ್ಬವನ್ನು ಶುಕ್ರವಾರ ಸಡಗರ...

Homeಪ್ರಮುಖ ಸುದ್ದಿ

ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಮಾಳವಿಕಾ ಅವಿನಾಶ್ ಸಲಹೆ

ಶಿಕಾರಿಪುರ ಲೈವ್: ಮಹಿಳೆಯರು ಸಮಾಜ ಮುಖಿಯಾಗಿ ಕೆಲಸ ಮಾಡುವ ಮೂಲಕ ಸಮಾಜಕ್ಕಾಗಿ ಕೊಡುಗೆ ನೀಡುವ ಮನೋಭಾವ...

ಪ್ರಮುಖ ಸುದ್ದಿ

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನ ಪ್ರಯುಕ್ತ ಹೋಮ ಹವನ- ರಕ್ತದಾನ ಶಿಬಿರ

ಶಿಕಾರಿಪುರ ಲೈವ್: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಪಟ್ಟ‌ಣದಲ್ಲಿ ಬಿಜೆಪಿ ಮುಖಂಡರು ಹಾಗೂ...

ಪ್ರಮುಖ ಸುದ್ದಿ

ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ ಶಿವನ ಧ್ಯಾನಿಸುವ ಹಬ್ಬ: ಸಂಸದ ಬಿ.ವೈ. ರಾಘವೇಂದ್ರ

ಶಿಕಾರಿಪುರ ಲೈವ್: ಮಹಾಶಿವರಾತ್ರಿ ಮನೊರಂಜನೆಯ ಹಬ್ಬವಲ್ಲ, ಶಿವನನ್ನು ಧ್ಯಾನ ಮಾಡುವ ಹಬ್ಬವಾಗಿದೆ ಎಂದು ಸಂಸದ ಬಿ.ವೈ....